CinemaNational

ಹೈದರಾಬಾದ್‌ನಲ್ಲಿ ಕನ್ನಡ ಕಿರುತೆರೆ ನಟ ಚಂದನ್‌ಗೆ ಕಪಾಳಮೋಕ್ಷ

ಹೈದರಾಬಾದ್‌; ತೆಲುಗು ಧಾರಾವಾಹಿಯೊಂದರ ಶೂಟಿಂಗ್‌ ವೇಳೆ ಕನ್ನಡದ ಕಿರುತೆರೆ ನಟ ಚಂದನ್‌ ಕುಮಾರ್‌ಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಈ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಚರ್ಚೆಗೆ ಕಾರಣವಾಗಿದೆ.

ಚಂದನ್‌ ಕುಮಾರ್‌ ಅವರು ಇತ್ತೀಚೆಗೆ ತೆಲುಗು ಕಿರುತೆರೆಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ತೆಲುಗಿನ ಸಾವಿತ್ರಮ್ಮಗಾರಿ ಅಬ್ಬಾಯಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಧಾರವಾಹಿಯ ಶೂಟಿಂಗ್‌ ವೇಳೆ ಸೆಟ್‌ನಲ್ಲಿ ಈ ಧಾರಾವಾಹಿಯ ತಂತ್ರಜ್ಞರು ಚಂದ್ರನ್‌ ಕುಮಾರ್‌ಗೆ ಕಪಾಳಮೋಕ್ಷ ಮಾಡಿದ್ದಾರೆ.

ಧಾರವಾಹಿಯಲ್ಲಿ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ಚಂದನ್‌ ಕುಮಾರ್‌, ಶೂಟಿಂಗ್ ವೇಳೆ ಕ್ಯಾಮೆರಾಮೆನ್ ಹಾಗೂ ತಂತ್ರಜ್ಞರ ಜೊತೆ ಕಿರಿಕ್‌ ಮಾಡಿಕೊಂಡಿದ್ದರು ಎನ್ನಲಾಗಿದೆ.  ಈ ವೇಳೆ ತೆಲುಗು ತಂತ್ರಜ್ಞರು ಚಂದನ್‍ಗೆ ನಿಂದಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದರಿಂದ ಚಂದನ್‌ ಕಪಾಳ ಮೋಕ್ಷ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಒಂದು ವಿಡಿಯೋ ಈಗ ವೈರಲ್‌ ಆಗಿದೆ.

ಚಂದನ್ ಹಿಂದೆ ಲಕ್ಷ್ಮೀ ಬಾರಮ್ಮ, ‘ರಾಧಾ ಕಲ್ಯಾಣ’, ‘ಸರ್ವ ಮಂಗಳ ಮಾಂಗಲ್ಯೇ’ ಧಾರವಾಹಿಗಳಲ್ಲಿ ನಟಿಸಿದ್ದರು. ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಲವ್ ಯು ಅಲಿಯಾ, ಅರ್ಜುನ್ ಸರ್ಜಾ ನಿರ್ದೇಶನದ “ಪ್ರೇಮ ಬರಹ” ಸೇರಿ ಕನ್ನಡದ ಕೆಲವು ಸಿನಿಮಾಗಳಲ್ಲೂ ಚಂದನ್ ಬಣ್ಣಹಚ್ಚಿದ್ದಾರೆ. ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ’ ಮರಳಿ ಮನಸಾಗಿದೆ, ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

 

Share Post