CrimeDistricts

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ; 16 ದಿನಗಳ ಬಳಿಕ ಸಿಕ್ಕಿಬಿದ್ದ ಕೊಲೆಗಡುಕರು

ಮಂಗಳೂರು; ಹಿಂದೂ ಪರ ಸಂಘಟನೆ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಕೊನೆಗೂ ತಗ್ಲಾಕ್ಕೊಂಡಿದ್ದಾರೆ. ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಹದಿನಾರು ದಿನಗಳ ಬಳಿಕ ಪ್ರವೀಣ್‌ ಕೊಲೆಗಾರರು ಸಿಕ್ಕಿಬಿದ್ದಿದ್ದಾರೆ.

ಶಿಯಾಬ್‌, ರಿಯಾಜ್‌ ಹಾಗೂ ಬಶೀರ್‌ ಬಂಧಿತ ಆರೋಪಿಗಳು. ಕೊಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳು ಪದೇ ಪದೇ ಸ್ಥಳ ಬದಲಿಸುತ್ತಿದ್ದರು. ಗೌಪ್ಯ ಸ್ಥಳದಲ್ಲಿ ಆರೋಪಿಗಳಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳು ಮೂವರೂ ಒಂದೇ ಕಡೆ ಸಿಕ್ಕಿಬಿದ್ದಿದ್ದಾರೆ. ಮಂಗಳೂರು ಪೊಲೀಸರು ಇಂದು ಮಧ್ಯಾಹ್ನ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದು, ಅದರಲ್ಲಿ ಪೂರ್ಣ ಮಾಹಿತಿ ನೀಡಲಿದ್ದಾರೆ.

Share Post