CrimeDistricts

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಇಬ್ಬರ ಮರ್ಡರ್‌

ಕೊಪ್ಪಳ; ಕೊಪ್ಪಳ ಜಿಲ್ಲೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ದಾರುವಾಗಿ ಸಾವನ್ನಪ್ಪಿದ್ದಾರೆ. ಕನಕಗಿರಿ ತಾಲ್ಲೂಕಿನ ಹುಲಿ ಹೈದರ ಎಂಬ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಗ್ರಾಮದಲ್ಲಿ ಕ್ಷುಲ್ಲಕ ವಿಚಾರವೊಂದರ ಕಾರಣ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಇದು ತಾರಕಕ್ಕೇರಿದ್ದು, ಮಾರಕಾಸ್ತ್ರಗಳಿಂದ ಬಡಿದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ. ಮಾರಾಮಾರಿಯಲ್ಲಿ ಯಳಕಪ್ಪ ತಳವಾರ ಹಾಗೂ ಭಾಷಾ ಸಾಬ್‌ ಎಂಬುವವರು ಸಾವನ್ನಪ್ಪಿದ್ದಾರೆ. ಧರಣ ಹರಿಜನ ಎಂಬುವವರು ಗಾಯಗೊಂಡಿದ್ದಾರೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share Post