CrimeDistricts

ಶಿವಮೊಗ್ಗದಲ್ಲಿ ಮತ್ತೊಬ್ಬ ಯುವಕನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಶಿವಮೊಗ್ಗ; ಒಂದು ಕಡೆ ಸಾವರ್ಕರ್‌ ಬ್ಯಾನರ್‌ ವಿಚಾರವಾಗಿ ಶಿವಮೊಗ್ಗ ಉದ್ವಗ್ನವಾಗಿದೆ. ಹೀಗಾಗಿ ನಗರದಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಘೋಷಣೆ ಮಾಡಲಾಗಿದೆ. ಹೀಗಿರುವಾಗಲೇ ಯುವಕನೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ.

ಶಿವಮೊಗ್ಗದ ಅಶೋಕ ನಗರ ಪ್ರದೇಶದಲ್ಲಿ ಪ್ರವೀಣ್‌  (27) ಎಂಬ ಯುವಕನಿಗೆ ಚೂರಿ ಇರಿಯಲಾಗಿದೆ.  ಗಾಂಧಿ ಬಜಾರ್ ನಲ್ಲಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಹೊರಟಾಗ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ. ಯುವಕನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಈ ಘಟನೆಗೂ ಎರಡು ಗಂಟೆ ಮೊದಲು ಕೂಡಾ ಪ್ರೇಮ್‌ ಸಿಂಗ್‌ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿತ್ತು. ಘಟನೆ ನಡೆದು ಎರಡು ಗಂಟೆ ಅವಧಿಯಲ್ಲೇ ಮಗತ್ತೊಂದು ದುರ್ಘಟನೆ ನಡೆದಿದೆ. ಇದರಿಂದಾಗಿ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಸ್ಥಿತಿ ಏರ್ಪಟ್ಟಿದೆ.

 

Share Post