CrimeDistricts

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಚಾಕು ಇರಿತ; ಬಜರಂಗದಳದ ಕಾರ್ಯಕರ್ತನಿಗೆ ಗಾಯ

ಶಿವಮೊಗ್ಗ; ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ನಡೆದಿದೆ. ನಿನ್ನೆ ಶಿವಮೊಗ್ಗ ನಗರದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿತ್ತು. ಇದೀಗ ಭದ್ರಾವತಿಯ ನೆಹರೂ ಬಡಾವಣೆಯಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಚಾಕುವಿನಿಂದ ಇರಿಯಲಾಗಿದೆ.

ಬಜರಂಗದಳದ ಕಾರ್ಯಕರ್ತ ಸುನಿಲ್‌ಗೆ ಚಾಕುವಿನಿಂದ ಇರಿಯಲಾಗಿದ್ದು, ಗಾಯಾಳುವನ್ನು ಭದ್ರಾವತಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂದಲೆಳೆ ಅಂತರದಲ್ಲಿ ಸುನಿಲ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಚ್ಚಿ ಅಲಿಯಾಸ್‌ ಮುಬಾರಕ್‌ ಹಾಗೂ ಇತರ ನಾಲ್ವರಿಂದ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ನಡೆದ ಘಟನೆ ನಂತರ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇದರ ನಡುವೆ ಈ ಕೃತ್ಯ ಎಸಗಲಾಗಿದೆ.

Share Post