CrimeDistricts

ಕಾಂಗ್ರೆಸ್‌ನಿಂದ ಮಡಿಕೇರಿ ಚಲೋ ಹಿನ್ನೆಲೆ; ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

ಕೊಡಗು; ಕೊಡಗು ಭೇಟಿ ವೇಳೆ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ 26ರಂದು ಕಾಂಗ್ರೆಸ್ ನಿಂದ ಮಡಿಕೇರಿ ಚಲೋ ಹಮ್ಮಿಕೊಂಡಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ವತಿಯಿಂದ ಜನಜಾಗೃತಿ ಸಮಾವೇಶ ಆಯೋಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಳಿಗ್ಗೆ ಆರು ಗಂಟೆಯಿಂದ ಆಗಸ್ಟ್ 27ರ ಸಂಜೆ 6:00 ವರೆಗೆ ಮಡಿಕೇರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲಾಧಿಕಾರಿ ಡಾ. ಸತೀಶ್ ಈ ಆದೇಶ ಹೊರಡಿಸಿದ್ದಾರೆ.

ಈ ಸಮಯದಲ್ಲಿ ಯಾವುದೇ ಸಮಾರಂಭ ಅಥವಾ ಸಭೆಗಳನ್ನು ನಡೆಸುವಂತಿಲ್ಲ, ಹೆಚ್ಚು ಗುಂಪು ಸೇರುತ್ತಿಲ್ಲ ಘೋಷಣೆ ಕೂಗುವಂತಿಲ್ಲ ಇದರ ಜೊತೆಗೆ ಯಾವುದೇ ವಿಜಯೋತ್ಸವ ಆಚರಿಸುವಂತಿಲ್ಲ ಎಂದು ತಿಳಿಸಲಾಗಿದೆ. ಇದರ ಜೊತೆಗೆ ನಿಷೇಧ ಈ ಅವಧಿಯಲ್ಲಿ ಬೆಳಿಗ್ಗೆ 6:00 ಗಂಟೆಯಿಂದ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Share Post