CrimeDistricts

ದಾವಣಗೆರೆ ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ

ದಾವಣಗೆರೆ; ದಾವಣಗೆರೆ  ಜಿಲ್ಲೆ ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ  ಚಿರತೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಮಕ್ಕೆಜೋಳದ ಜಮೀನಿನಲ್ಲಿ ಕಳೆ ತೆಗೆಯುತ್ತಿದ್ದಾಗ ಚಿರತೆ ದಾಳಿ ಮಾಡಿದ್ದಯ, ಕಮಲಾಬಾಯಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

 

  10 ಜನ ಕೂಲಿಕಾರ್ಮಿಕ ಮಹಿಳೆಯರು ಮೆಕ್ಕೆಜೋಳದ ಜಮೀನಿನಲ್ಲಿ ಕಳೆ ತೆಗೆಯುತ್ತಿದ್ದರು. ಈ ವೇಳೆ ಕಮಲಾಬಾಯಿ ಸ್ವಲ್ಪ ಹಿಂದೆ ಉಳಿದಿದ್ದರು. ಈ ವೇಳೆ  ಚಿರತೆ ಕಮಲಾಬಾಯಿ ಅವರ ಮೇಲೆ ದಾಳಿ ಮಾಡಿದೆ. ಅವರ ಕುತ್ತಿಗೆಗೆ ಬಾಯಿ ಹಾಕಿ 100 ಅಡಿ ದೂರ ಎಳೆದುಕೊಂಡು ಹೋಗಿದೆ. ಇದರಿಂದ ಅವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮಹಿಳೆಯೊಬ್ಬರು ತಿಳಿಸಿದ್ದಾರೆ.

Share Post