Bengaluru

ಕೊವಿಡ್‌ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ; ದಿನೇಶ್‌ ಗುಂಡೂರಾವ್‌ ಮನವಿ

ಬೆಂಗಳೂರು; ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಸರ್ಕಾರ ನೀಡಬೇಕಿದ್ದ ಪರಿಹಾರ ಇನ್ನೂ ಪಾವತಿಯಾಗಿಲ್ಲ. ಹೀಗಾಗಿ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್‌ ಗುಂಡೂರಾವ್‌ ಬಿಬಿಎಂಪಿ ಪಶ್ಚಿಮ ವಲಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಕೊವಿಡ್‌ನಿಂದ ಮೃತಪಟ್ಟವರ ಕುಟುಂಬದವರಿಗೆ ಸಂಧ್ಯಾ ಸುರಕ್ಷಾ ಯೋಜನೆಯಡಿ ಒಂದು ಲಕ್ಷ ರೂಪಾಯಿ ಹಾಗೂ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಐವತ್ತು ಸಾವಿರ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿತ್ತು. ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದವರಿಗೆ ಹಣ ಪಾವತಿ ಮಾಡಲಾಗಿತ್ತು. ಆದ್ರೆ ಅನಂತರ ಅರ್ಜಿ ಸಲ್ಲಿಸಿದ 98 ಕುಟುಂಬಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅಗತ್ಯ ದಾಖಲೆ ಸಲ್ಲಿಸಿ ತಿಂಗಳುಗಳೇ ಕಳೆದರೂ ಪರಿಹಾರ ಕೈಸೇರಿಲ್ಲ. ಹೀಗಾಗಿ ಫಲಾನುಭವಿಗಳು ನಿತ್ಯ ನನ್ನ ಕಚೇರಿಗೆ ಭೇಟಿ ನೀಡಿ ಹಣ ಬಿಡುಗಡೆ ಮಾಡಿಸುವಂತೆ ಮಾಡುತ್ತಿದ್ದಾರೆ. ಹೀಗಾಗಿ ಪರಿಹಾರ ಹಣ ಬಿಡುಗಡೆ ಮಾಡಬೇಕೆಂದು ದಿನೇಶ್‌ ಗುಂಡೂರಾವ್‌ ಬಿಬಿಎಂಪಿ ಪಶ್ಚಿಮ ವಲಯ ಆಯುಕ್ತರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

Share Post