Districts

ಒಂದಿಂಚೂ ಜಾಗ ತೆಲಂಗಾಣಕ್ಕೆ ಬಿಟ್ಟುಕೊಡಲ್ಲ; ಸಿಎಂ ಬೊಮ್ಮಾಯಿ

ರಾಯಚೂರು; ತೆಲಂಗಾಣಕ್ಕೆ ರಾಯಚೂರಿನ ಒಂದಿಂಚೂ ಜಾಗವನ್ನು ಬಿಟ್ಟುಕೊಡುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆ ತೆಲಂಗಾಣಕ್ಕೆ ಸೇರಬೇಕು ಎಂದು ಅಲ್ಲಿನ ಸಿಎಂ ಕೆಸಿಆರ್‌ ಹೇಳಿರುವುದಕ್ಕೆ ತಿರುಗೇಟು ನೀಡಿದರು.

ರಾಯಚೂರಿನ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರರಾವ್ ಹೇಳಿಕೆ ಹಾಸ್ಯಾಸ್ಪದವಾಗಿದೆ. ರಾಯಚೂರು ಜಿಲ್ಲೆ ಈಗಾಗಲೇ ಅಭಿವೃದ್ಧಿಯತ್ತ ಸಾಗಿದೆ. ತೆಲಂಗಾಣವು ಹಿಂದುಳಿದ ಪ್ರದೇಶವೆಂದು ಅವರು ಹೋರಾಟ ಮಾಡಿ, ಈಗ ಮುಖ್ಯಮಂತ್ರಿ ಆಗಿದ್ದಾರೆ. ತೆಲಂಗಾಣ ಅಭಿವೃದ್ಧಿ ಆಗದಿರುವುದನ್ನು ಮರೆಮಾಚಲು ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

Share Post