HealthInternational

ನನಗೆ ತುರ್ತು ವೈದ್ಯಕೀಯ ನೆರವು ಬೇಕಿದೆ; ಶ್ರೀಲಂಕಾಗೆ ನಿತ್ಯಾನಂದ ಪತ್ರ

ಭಾರತದಿಂದ ಪರಾರಿಯಾಗಿ ಕೈಲಾಸ ಎಂಬ ಹೊಸ ದೇಶ ಕಟ್ಟಿರುವ ನಿತ್ಯಾನಂದ ಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರು ವೈದ್ಯಕೀಯ ನೆರವು ನೀಡಬೇಕೆಂದು ಶ್ರೀಲಂಕಾ ಸರ್ಕಾರವನ್ನು ಕೋರಿದ್ದಾರೆ. ಈ ಬಗ್ಗೆ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಕೂಡಾ ಬರೆದಿದ್ದಾರೆ. ನನಗೆ ತುರ್ತು ವೈದ್ಯಕೀಯ ನೆರವು ಬೇಕಾಗಿದೆ. ಕೂಡಲೇ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಆಗಸ್ಟ್ 7ರಂದೇ ನಿತ್ಯಾನಂದ ಕೈಲಾಸದಲ್ಲಿ ವೈದ್ಯಕೀಯ ಸೌಲಭ್ಯದ ಕೊರೆತೆಯನ್ನು ಉಲ್ಲೇಖಿಸಿ ಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ನಾನು ಅಸ್ವಸ್ಥನಾಗಿದ್ದೇನೆ, ಜೀವಕ್ಕೆ ಅಪಾಯವಿದ್ದು, ತುರ್ತು ಚಿಕಿತ್ಸೆಯ ಅವಶ್ಯಕತೆಯಿದೆ. ಕೂಡಲೇ ವೈದ್ಯಕೀಯ ಅಗತ್ಯತೆಗಳನ್ನು ಪೂರೈಸುವಂತೆ ಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರಿಗೆ ಕೋರಿದ್ದರು. ಇದೀಗ ಈ ವಿಚಾರ ಬಯಲಿಗೆ ಬಂದಿದೆ.

 

Share Post