National

ವಂದೇ ಮಾತರಂ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಗಾಂಧಿನಗರ; ಗಾಂಧಿನಗರ-ಮುಂಬೈ ಸೆಂಟ್ರಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇಂದು ಚಾಲನೆ ಸಿಕ್ಕಿದೆ.  ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರದಲ್ಲಿ ಹೊಸ ರೈಲಿಗೆ ಚಾಲನೆ ನೀಡಿದರು.

      ರೈಲಿಗೆ ಚಾಲನೆ ನೀಡಿದ್ದ ನಂತರ ಪ್ರಧಾನಿ ಮೋದಿಯವರು, ರೈಲ್ವೆ ಸಿಬ್ಬಂದಿ, ಮಹಿಳಾ ಉದ್ಯಮಿಗಳು ಮತ್ತು ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರದಿಂದ ಅಹಮದಾಬಾದ್‌ಗೆ ಅದೇ ರೈಲಿನಲ್ಲಿ ಪ್ರಯಾಣ ಮಾಡಿದರು.

     ಇದು ದೇಶದ ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು. ಈ ರೈಲು ಗಾಂಧಿನಗರ ಮತ್ತು ಮುಂಬೈ ನಡುವೆ ಸಂಚರಿಸಲಿದ್ದು, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳ ರಾಜಧಾನಿಗಳನ್ನು ಸಂಪರ್ಕಿಸುತ್ತದೆ. ಭಾನುವಾರ ಹೊರತುಪಡಿಸಿ ವಾರದಲ್ಲಿ 6 ದಿನ ರೈಲು ಸಂಚರಿಸಲಿದೆ.

 

Share Post