DistrictsNational

ಬಳ್ಳಾರಿಗೆ ಭೇಟಿ ನೀಡಲು ಜನಾರ್ದನರೆಡ್ಡಿಗೆ ಅವಕಾಶ

ನವದೆಹಲಿ; ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಲು ಸುಪ್ರೀಂಕೋರ್ಟ್​ ಅನುಮತಿ ನೀಡಿದೆ. ಅವರ ಮಗಳನ್ನು ಭೇಟಿ ಮಾಡಲು ಹಾಗೂ ಬಳ್ಳಾರಿಯಲ್ಲಿ ನವೆಂಬರ್ 6 ರವರೆಗೆ ಇರಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

  ನ್ಯಾಯಮೂರ್ತಿ ಎಂ. ಆರ್. ಶಾ ಮತ್ತು ಕೃಷ್ಣ ಮುರಾರಿ ಅವರ ಪೀಠ ಈ ತೀರ್ಪು ನೀಡಿದೆ. ಇದೇ ವೇಳೆ ವಿಚಾರಣೆ ವಿಳಂಬಗೊಳಿಸುವ ಯಾವುದೇ ಪ್ರಯತ್ನ ಮಾಡದಂತೆ ರೆಡ್ಡಿಗೆ ಸೂಚಿಸಲಾಗಿದೆ. ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ರೆಡ್ಡಿ 2015ರಿಂದ ಜಾಮೀನಿನ ಮೇಲೆ ಹೊರಗಿದ್ದು, ಕರ್ನಾಟಕದ ಬಳ್ಳಾರಿ ಮತ್ತು ಆಂಧ್ರಪ್ರದೇಶದ ಅನಂತಪುರ ಮತ್ತು ಕಡಪಕ್ಕೆ ಭೇಟಿ ನೀಡದಂತೆ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹಲವು ಷರತ್ತುಗಳನ್ನು ವಿಧಿಸಿದೆ.
  ಇತ್ತೀಚೆಗಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಗಳನ್ನು ಭೇಟಿ ಮಾಡಲು ಬಳ್ಳಾರಿಗೆ ಭೇಟಿ ನೀಡಲು ರೆಡ್ಡಿ ಅನುಮತಿ ಕೋರಿದ್ದರು.
Share Post