CrimeDistricts

ಮೈಸೂರಿನಲ್ಲಿ ಕಳ್ಳನೊಬ್ಬನ ಭೀಕರ ಹತ್ಯೆ

ಮೈಸೂರು; ಈ ಹಿಂದೆ ಹಲವಾರು ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನ ದೇವರಾಜ ಮಾರುಕಟ್ಟೆ ಬಳಿ ನಡೆದಿದೆ.

  ಕಳೆದ ರಾತ್ರಿ ಈ ಕೃತ್ಯ ಎಸಗಲಾಗಿದೆ. ಕುಂಬಾರ ಕೊಪ್ಪಲಿನ ನಿವಾಸಿ ಸುನಿಲ್ ಅಲಿಯಾಸ್ ದತ್ತು (25) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಸುನಿಲ್‌ ಹಲವಾರು ಸುಲಿಗೆ ಹಾಗೂ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಆದ್ರೆ ಇತ್ತೀಚೆಗೆ ಅಂತಹ ಚಟುವಟಿಕೆಗಳನ್ನು ನಿಲ್ಲಿಸಿ, ದುಡಿದು ಜೀವನ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

   ಕಳೆದ ರಾತ್ರಿ ಮೈಸೂರಿನ ದೇವರಾಜ ಮಾರುಕಟ್ಟೆಯ ಬೋಟಿ ಬಜಾರ್​ನ ಹೋಟೆಲ್​​ವೊಂದರ ಮುಂಭಾಗದಲ್ಲಿ ಸುನಿಲ್‌ ನಿಂತಿದ್ದರು. ಈ ವೇಳೆ ಗುಂಪೊಂದು ದಾಳಿ ಮಾಡಿ ಹತ್ಯೆ ಮಾಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Share Post