DistrictsPolitics

ಕಾಂಗ್ರೆಸ್‌ ತಿರುಕನ ಕನಸು ಕಾಣುತ್ತಿದೆ; ಮಾಜಿ ಸಿಎಂ ಯಡಿಯೂರಪ್ಪ

ಹೂವಿನಹಡಗಲಿ; ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸ್ಥಿತಿಗತಿ ಹಾಗೂ ಆಯಾ ಕ್ಷೇತ್ರಗಳಲ್ಲಿ ಯಾರ ಪರ ಜನರ ಒಲವಿದೆ ಎನ್ನುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸರ್ವೇ ಮಾಡಿಸ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಳ್ಳಾರಿಯ ಹೂವಿನಹಡಗಲಿಯ ಜಿಬಿಆರ್‌ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ‌ದಿಂದಲೂ ಕೂಡಾ ಬಗ್ಗೆ ಸರ್ವೇ ನಡೆಸಲಾಗುತ್ತಿದೆ. ಪಕ್ಷದ ಮುಖಂಡರ ಕೆಲಸ ನೋಡಿಕೊಂಡು ಟಿಕೆಟ್ ಹಂಚಿಕೆ ಮಾಡಲಾಗುತ್ತದೆ. ಯಾರನ್ನು ಆಯ್ಕೆ ಮಾಡುತ್ತೇವೆಯೋ ಅವರ ಗೆಲುವಿಗೆ ಎಲ್ಲ ಕಾರ್ಯಕರ್ತರು ಶ್ರಮಿಸಬೇಕೆಂದು‌ ಯಡಿಯೂರಪ್ಪ ಮನವಿ ಮಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ‌ ಎನ್ನುವುದು ತಿರುಕನ ಕನಸು ಅಷ್ಟೇ ಎಂದ ಯಡಿಯೂರಪ್ಪ, ದೇಶದಲ್ಲಿ ಎರಡು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಉಳಿದ ಕಡೆ ಕಾಂಗ್ರೆಸ್‌ ಅಡ್ರೆಸ್‌ಗೂ ಇಲ್ಲ ಎಂದು ಲೇವಡಿ ಮಾಡಿದರು.

Share Post