CrimeNational

ಕೇದಾನಾಥ ಬಳಿ ಹೆಲಿಕಾಪ್ಟರ್‌ ದುರಂತ; ಆರು ಮಂದಿ ದುರ್ಮರಣ

ಕೇದಾರನಾಥ; ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನವಾಗಿದ್ದು, ಇಬ್ಬರು ಪೈಲಟ್‌ಗಳು ಸೇರಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಗುಪ್ತಕಾಶಿಯಿಂದ ಕೇದಾರನಾಥಕ್ಕೆ ಯಾತ್ರಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಕೇದಾರನಾಥ ಇನ್ನು ಎರಡು ಕಿಲೋ ಮೀಟರ್‌ ಎನ್ನುವಾಗ ಹೆಲಿಕಾಪ್ಟರ್‌ ಪತನವಾಗಿದೆ. ಹವಾಮಾನ ವೈಪರೀತ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಗರುಡಚೆಟ್ಟಿ ಎಂಬಲ್ಲಿ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

Share Post