DistrictsPolitics

ಕಾಂಗ್ರೆಸ್‌ ಮುಳುಗುತ್ತಿರುವಾಗ ಖರ್ಗೆಗೆ ಅಧಿಕಾರ ಕೊಟ್ಟಿದ್ದಾರೆ; ಸಿಎಂ ಬೊಮ್ಮಾಯಿ

ಕಲಬುರಗಿ; ಇಡೀ ದೇಶದಲ್ಲಿ ಕಾಂಗ್ರೆಸ್‌ ಮುಳುಗುತ್ತಿದೆ. ಇಂತಹ ಸಂದರ್ಭದಲ್ಲಿ ಖರ್ಗೆಯವರಿಗೆ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಅಧಿಕಾರದಲ್ಲಿದ್ದಾಗ ಅಧಿಕಾರ ನೀಡಲಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲ್ಲೂಕಿನ ಮಹಗಾಂವ್‌ನಲ್ಲಿ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಅವರು ಮಾತನಾಡಿದರು.

ಎಸ್‌ಸಿ, ಎಸ್‌ಟಿಯವರಿಗೆ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆ ಐವತ್ತು ವರ್ಷಗಳಿಂದ ಇದೆ. ಆದರೆ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಮೀಸಲಾತಿ ಹೆಚ್ಚು ಮಾಡಲಿಲ್ಲ. ಆದ್ರೆ ನಾವು ಈಗ ಮೀಸಲಾತಿ ಹೆಚ್ಚು ಮಾಡಿದ್ದೇವೆ. ನಾವು ದಲಿತರ ಪರವಾಗಿದ್ದೇವೆ ಎಂಬುದನ್ನು ತೋರಿಸಿದ್ದೇವೆ ಎಂದು ಸಿಎಂ ಹೇಳಿದರು. ಕಾಂಗ್ರೆಸ್‌ ಪಕ್ಷ ಮುಳುಗುತ್ತಿದೆ. ಅದು ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಅಲ್ಪಸಂಖ್ಯಾತರಿಗೂ ಕೂಡಾ ಯಾವುದೇ ಅನುಕೂಲ ಮಾಡಿಕೊಡಲಿಲ್ಲ ಎಂದು ಸಿಎಂ ಹೇಳಿದರು.

Share Post