DistrictsPolitics

ಕಾಂಗ್ರೆಸ್‌ ಸ್ಥಿತಿ ಮನೆಯೊಂದು ಮೂರು ಬಾಗಿಲು; ಕೇಂದ್ರ ಸಚಿವ ಜೋಶಿ

ಧಾರವಾಡ; ಕಾಂಗ್ರೆಸ್‌ ಪಕ್ಷ ಒಡೆದ ಮನೆಯಾಗಿದೆ. ಅದು ಮನೆಯೊಂದು ಮೂರು ಬಾಗಿಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಎರಡು ಬಾಗಿಲುಗಳಿದ್ದವು, ಈಗ ಖರ್ಗೆ ಅವರ ಬಾಗಿಲೊಂದು ಹುಟ್ಟಿಕೊಂಡಿದೆ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರ ಬಣಗಳಿದ್ದವು. ಈಗ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಗರ ಗುಂಪೊಂದು ಹುಟ್ಟಿಕೊಂಡಿದೆ. ಹೀಗಾಗಿ ಕಾಂಗ್ರೆಸ್ ಎಷ್ಟೇ ಯಾತ್ರೆ ಮಾಡಿದರೂ ಸುಧಾರಣೆ ಆಗುವುದಕ್ಕೆ ಸಾಧ್ಯವೇ ಇಲ್ಲ ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

Share Post