BengaluruCinema

ಅಪ್ಪು ಅಗಲಿ ಇಂದಿಗೆ ವರ್ಷ; ಅಭಿಮಾನಿಗಳಿಗೆ ಭಾವುಕ ಪತ್ರ ಬರೆದ ಅಶ್ವಿನಿ

ಬೆಂಗಳೂರು; ಪುನೀತ್‌ ರಾಜ್‌ ಕುಮಾರ್‌ ನಿಧನರಾಗಿ ಇಂದಿಗೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪುನೀತ್‌ ಸಮಾಧಿಗೆ ಅವರ ಕುಟುಂಬಸ್ಥರು ಪೂಜೆ ಸಲ್ಲಿಸಿದರು. ಈ ವೇಳೆ ಪುನೀತ್‌ ಪತ್ನಿ ಅಶ್ವಿನಿ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಅನಂತರ ಅವರು ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.

ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರ ಅಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಮ್ಮ ಸತ್ಕಾರ್ಯಗಳಲ್ಲಿಯೂ ಸದಾ ಜೀವಂತವಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲವೇ ನನಗೆ ದಾರಿಯಾಗಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು ಎಂದು ಅಶ್ವಿನಿಯವರು ಭಾವುಕರಾಗಿ ಪತ್ರ ಬರೆದಿದ್ದಾರೆ.

Share Post