CrimeNational

ಕಾರಿಗೆ ಒರಗಿದ್ದಕ್ಕೆ ಬಾಲಕನಿಗೆ ಥಳಿತ; ಕೇರಳ ವ್ಯಕ್ತಿ ಅರೆಸ್ಟ್‌

ತಿರುವನಂತಪುರಂ; ಕಾರಿಗೆ ಒರಗಿ ನಿಂತಿದ್ದ ಎಂಬ ಕಾರಣಕ್ಕೆ ಆರು ವರ್ಷದ ಬಾಲಕನ ಎದೆಗೆ ಒದ್ದ ಆರೋಪದ ಮೇಲೆ ಕಾರಿನ ಚಾಲಕನನ್ನು ತಿರುವನಂತಪುರ ಪೊಲೀಸರು ಬಂಧಿಸಿದ್ದಾರೆ. ಬಾಲಕನ ಎದೆಗೆ ಕಾಲಿನಿಂದ ಒದ್ದಿದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶಗಳು ವ್ಯಕ್ತವಾಗಿದ್ದವು. ಹೀಗಾಗಿ ಪೊಲೀಸರು ಬಾಲಕನನ್ನು ಒದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಮಾಹಿತಿ ಪ್ರಕಾರ ಬಾಲಕ ರಾಜಸ್ಥಾನದ ವಲಸೆ ಕಾರ್ಮಿಕರ ಮಗ ಎಂದು ತಿಳಿದುಬಂದಿದೆ. ಪ್ರತ್ಯಕ್ಷದರ್ಶಿ ವಕೀಲರೊಬ್ಬರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊನ್ನಿಯಂಪಾಲಂ ನಿವಾಸಿ ಶಿಹಶಾದ್ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

Share Post