CrimeDistricts

ಶಿವಮೂರ್ತಿ ಫೋಟೋ ಕಳವು ಪ್ರಕರಣ; ಮಾಜಿ ಆಡಳಿತಾಧಿಕಾರಿ ಎಸ್‌.ಕೆ.ಬಸವರಾಜನ್‌ ಅರೆಸ್ಟ್‌

ಚಿತ್ರದುರ್ಗ; ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿಯವರ ಫೋಟೋ ಕಳವು ಮಾಡಿರುವ ಆರೋಪದ ಮೇಲೆ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್‌.ಕೆ.ಬಸವರಾಜನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ಪೊಲೀಸರು ಬಸವರಾಜನ್‌ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈಗಾಗಲೇ ಫೋಟೋ ಕಳವು ಸಂಬಂಧ ಬಂಧಿತರಾಗಿರುವ ಹೊಸಹಳ್ಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೋಹನ್‌ ಮೂರ್ತಿ ಹಾಗೂ ಡಿಪ್ಲೊಮಾ ಕಾಲೇಜು ಉಪನ್ಯಾಸಕ ಶಿವಾನಂದಸ್ವಾಮಿ ನೀಡಿದ ಮಾಹಿತಿ ಆಧರಿಸಿ, ಬಸವರಾಜನ್‌ ಅವರನ್ನು ಬಂಧಿಸಲಾಗಿದೆ. ಫೋಟೊ ತೆಗೆಯಲು ಬಸವರಾಜನ್ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪವಿದೆ. ಬಸವರಾಜನ್ ಪತ್ನಿ ಸೌಭಾಗ್ಯ ಅವರು ನಾಪತ್ತೆಯಾಗಿದ್ದು ಅವರಿಗಾಗಿಯೂ ಪೊಲೀಸರು ಶೋಧಕಾರ್ಯ ನಡೆಸಲಾಗುತ್ತಿದೆ.

ಅ.6ರಂದು ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ 47 ಫೋಟೊಗಳು ಕಳವಾಗಿದ್ದವು. ಸಿಸಿಟಿವಿ‌ ದೃಶ್ಯಾವಳಿಯ ಆಧಾರದ ಮೇಲೆ ನವೆಂಬರ್ 7ರಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

Share Post