DistrictsPolitics

ಐವತ್ತು ಬಾರಿ ಬಂದರೂ ಸಿದ್ದರಾಮಯ್ಯರನ್ನು ಸೋಲಿಸ್ತೇವೆ; ಕೋಲಾರ ಸಂಸದ

ಕೋಲಾರ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಿದರೆ, ಅವರನ್ನು ಹೀನಾಯವಾಗಿ ಸೋಲಿಸಿ ಮನೆಗೆ ಕಳುಹಿಸುತ್ತೇವೆ ಎಂದು ಕೋಲಾರ ಸಂಸದ ಎಸ್. ಮುನಿಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಐವತ್ತು ಬಾರಿ ಕೋಲಾರಕ್ಕೆ ಬಂದರೂ ಐವತ್ತು ಬಾರಿಯೂ ಸೋಲಿಸುತ್ತೇವೆ ಎಂದಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಕ್ಷೇತ್ರದ ಹುಡುಕಾಟದಲ್ಲಿರುವುದು ಶೋಚನೀಯ. ತಮ್ಮ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲೇ ಅವರಿಗೆ ಗೆಲ್ಲಲಾಗಲಿಲ್ಲ. ಬದಾಮಿ ಕ್ಷೇತ್ರದಲ್ಲಿ ಕೇವಲ 1700 ಮತಗಳ ಅಂತರದಲ್ಲಿ ಗೆದ್ದಿದ್ದಾರೆ ಎಂದು ಮುನಿಸ್ವಾಮಿ ಹೇಳಿದ್ದಾರೆ.

 

Share Post