CrimeDistricts

ಚಿಕ್ಕಮಗಳೂರು-ಹಾಸನದಲ್ಲಿ ಐಟಿ ದಾಳಿ; ಗಾಯತ್ರಿ ಶಾಂತೇಗೌಡ ನಿವಾಸದಲ್ಲಿ ಪರಿಶೀಲನೆ

ಚಿಕ್ಕಮಗಳೂರು; ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಅವರಿಗೆ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಚಿಕ್ಕಮಗಳೂರು ನಗರದ ಹೂವಿನ ಮಾರ್ಕೆಟ್‌ ರಸ್ತೆಯ ಗಾಯತ್ರಿ ಶಾಂತೇಗೌಡ ಅವರ ನಿವಾಸ ಮೇಲೆ ಐಟಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳು ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸಿದ್ದಾರೆ. 

ಮುಂಜಾನೆಯಿಂದಲೂ ಐಟಿ ಅಧಿಕಾರಿಗಳು ಗಾಯತ್ರಿ ಅವರ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡ್ತಿದ್ದಾರೆ. ಅಧಿಕಾರಿಗಳು ಬಂದಿದ್ದ ಕಾರಿನ ಗಾಜಿನ​ ಮೇಲೆ ಮದುವೆ ಬೋರ್ಡ್ ಇದೆ. ಯಾರಿಗೂ ಅನುಮಾನ ಬಾರದಿರಲೆಂದು ಈ ರೀತಿ ಬೋರ್ಡ್‌ ಹಾಕಿ ಬಂದಿದ್ದಾರೆ.  ಅಭಿನವ್ ವೆಡ್ಸ್​ ದೀಪಿಕಾ ಎಂದು ಕಾರಿನ ಮೇಲೆ ಪೋಸ್ಟರ್‌ ಅಂಟಿಸಲಾಗಿದೆ.

ಕಾಂಗ್ರೆಸ್‌ ನಾಯಕಿ ಗಾಯತ್ರಿ ಅವರ ಪತಿ ಶಾಂತೇಗೌಡ ಗುತ್ತಿಗೆದಾರರಾಗಿದ್ದು, ಕಳಸಾಪುರ ರಸ್ತೆಯ ಅವರ ಕ್ರಷರ್ ಮೇಲೆಯೂ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಇತ್ತ ಹಾಸನ ಜಿಲ್ಲೆ ಬೇಲೂರಿನಲ್ಲಿರುವ ಅಳಿಯ ಸಂತೋಷ್ ಅವರ ಮನೆ ಮೇಲೂ ದಾಳಿ ನಡೆದಿದೆ.

 

 

Share Post