BengaluruHealth

ಕಾಂಗ್ರೆಸ್‌ ಸಭೆಯಲ್ಲಿ ಕುಸಿದುಬಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ನಿಧನ

ಬೆಂಗಳೂರು; ಬೆಂಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಭೆಯಲ್ಲಿ ಬೀದರ್‌ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಕುಸಿದುಬಿದ್ದಿದ್ದು ಸಾವನ್ನಪ್ಪಿದ್ದಾರೆ. ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಸಭೆಗೆ ಅವರು ಆಗಮಿಸಿದ್ದರು. ಸಭೆ ಆರಂಭವಾಗುತ್ತಿದ್ದಂತೆ ಶ್ರೀಶೈಲಪ್ಪ ಅವರು ವಾಂತಿ ಮಾಡಿಕೊಂಡು ಕುಸಿದುಬಿದ್ದಿದ್ದಾರೆ. ಸಭೆ ಆರಂಭವಾಗಿದ್ದರಿಂದ ಶ್ರೀಶೈಲಪ್ಪ ಕಾರು ಇಳಿದು ಬೇಗ ಬೇಗ ಒಳಹೋಗುತ್ತಿದ್ದರು. ಈ ವೇಳೆ ಅವರು ಸುಸ್ತಾಗಿ ಕುಸಿದುಬಿದ್ದಿದ್ದಾರೆ. ಬೆಳಗ್ಗೆ ತಿಂಡಿ ತಿನ್ನದೇ ಅವರು ಸಭೆಗೆ ಆಗಮಿಸಿದ್ದರು ಎನ್ನಲಾಗಿದೆ.

 

Share Post