Districts

ಮಹಾರಾಷ್ಟ್ರ ನಾಯಕರ ಆಗಮನಕ್ಕೆ ವಿರೋಧ; ಬೆಳಗಾವಿಯಲ್ಲಿ ಜೋರಾಯ್ತು ಪ್ರತಿಭಟನೆ

ಬೆಳಗಾವಿ; ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ನಾಳೆ ಬೆಳಗಾವಿಗೆ ಆಗಮಿಸುತ್ತಿರುವುದಕ್ಕೆ ಕನ್ನಡ ಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ನಾಳೆ ಸಚಿವರ ಜೊತೆಗೆ ಶಂಭುರಾಜ್‌ ದೇಸಾಯಿ ಹಾಗೂ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ ಕೂಡಾ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ ಇವರಿಗೆ ಬೆಳಗಾವಿಗೆ ಬರಲು ಅವಕಾಶ ಕೊಡಬಾರದು ಎಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ.

ಮಹಾರಾಷ್ಟ್ರ ಸಚಿವರ ನಡೆ ಖಂಡಿಸಿ ಇಂದು ಬೆಂಗಳೂರಿನಿಂದ ವಿವಿಧ ಕನ್ನಡ ಸಂಘಟನೆಗಳು ಬೆಳಗಾವಿಗೆ ಬಂದಿವೆ. ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಸೇರಿರುವ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರದ ನಾಯಕರಿಗೆ ಬೆಳಗಾವಿ ಪ್ರವೇಶಿಸದಂತೆ ನಿರ್ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಳಗಾವಿ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

Share Post