BengaluruPolitics

ಕಾಂಗ್ರೆಸ್‌ ಸೇರುತ್ತಾರಾ ಎಚ್‌.ವಿಶ್ವನಾಥ್‌; ಕುತೂಹಲ ಮೂಡಿಸಿದ ಮಾಜಿ ಸಚಿವನ ನಡೆ

ನವದೆಹಲಿ; ವಿಧಾನಪರಿಷತ್‌ ಸದಸ್ಯ  ಹೆಚ್‌. ವಿಶ್ವನಾಥ್‌ ಅವರು ಮತ್ತೆ ಕಾಂಗ್ರೆಸ್‌ ಸೇರುವ ಸಾಧ್ಯತೆಗಳು ಕಂಡುಬರುತ್ತಿವೆ. ಇದಕ್ಕೆ ಪುಷ್ಠಿ ಎಂಬಂತೆ ವಿಶ್ವನಾಥ್‌ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.

ವಿಶ್ವನಾಥ್‌ ಬಿಜೆಪಿಯಲ್ಲಿದ್ದರೂ ಸ್ವಪಕ್ಷದವರ ವಿರುದ್ಧವೇ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. ಇತ್ತೀಚೆಗೆ ಅವರು ಕಾಂಗ್ರೆಸ್‌ ಪರವಾಗಿಯೂ ಮಾತನಾಡುತ್ತಾ ಬಂದಿದ್ದಾರೆ. ಈ ನಡುವೆ ಅವರು ಖರ್ಗೆ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ವಿರುದ್ಧ ಮುನಿಸಕೊಂಡು ಕಾಂಗ್ರೆಸ್ ತೊರೆದಿದ್ದ ಹೆಚ್​ ವಿಶ್ವನಾಥ್ ಅವರು ಈಗ ಮತ್ತೆ ಕಾಂಗ್ರೆಸ್‌ಗೆ ಮರಳುತ್ತಾರೆಂದು ಹೇಳಲಾಗುತ್ತಿದೆ. ಅವರು ಈ ಬಾರಿ ಏಕಾಏಕಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

 

Share Post