DistrictsPolitics

ಬಿಜೆಪಿ ಸುಳ್ಳಿನ ಯೂನಿವರ್ಸಿಟಿ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ; ಬಿಜೆಪಿ ಪಕ್ಷ ಸುಳ್ಳಿನ ಯೂನಿವರ್ಸಿಟಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಹದಾಯಿ ವಿಚಾರದ ಬಗ್ಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಜನರಿಗೆ ಬರೀ ಸುಳ್ಳನ್ನೇ ಹೇಳುತ್ತಿದ್ದಾರೆ ಎಂದು ಹೇಳಿದರು.

ಮಹದಾಯಿ ಯೋಜನೆಯನ್ನು ಮೂರೂವರೆ ವರ್ಷದಿಂದ ಮಾಡೋಕೆ ಆಗಿಲ್ಲ. ಈಗ ಅದರ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಗೋವಾ, ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆ. ಆದರೂ ಯಾಕೆ ಸಮಸ್ಯೆ ಬಗೆಹರಿಸಲಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದರು. ರಾಜ್ಯದಿಂದ ಆಯ್ಕೆಯಾದ ಬಿಜೆಪಿಯ ೨೬ ಸಂಸದರಿದ್ದಾರೆ. ಅವರು ಒಂದು ದಿನವೂ ಪ್ರಧಾನಿಯ ಬಳಿಗೆ ಹೋಗಿ ಮಾತನಾಡಲಿಲ್ಲ. ಈಗ ನಾವು ಜನರ ಪರವಾಗಿ ಧ್ವನಿ ಎತ್ತುತ್ತಿದ್ದೇವೆ. ಹೀಗಾಗಿ ಆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಇನ್ನು ಹೊಸ ವರ್ಷಕ್ಕೆ ಎಲ್ಲಾ ಪಕ್ಷದವರಿಗೂ ಒಳ್ಳೆಯದಾಗಲಿ ಎಂದು ಡಿ.ಕೆ.ಶಿವಕುಮಾರ್‌, ಅಧಿಕಾರ ಮಾತ್ರ ನಮಗೆ ಸಿಗಲಿ ಎಂದು ಹೇಳಿದ್ದಾರೆ. ಸಿಎಂ ಸ್ಥಾನ ನಿಮಗೇ ಸಿಗಬೇಕಾ ಸರ್‌ ಎಂದು ಪ್ರಶ್ನಿಸಿದ್ದಕ್ಕೆ, ಸಿಎಂ ನಾನಾಗೋದಲ್ಲ. ಅದನ್ನು ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ತೀರ್ಮಾನ ಮಾಡ್ತಾರೆ.

Share Post