DistrictsPolitics

ಸೋನಿಯಾ ಮುಂದೆ ಸಿದ್ದರಾಮಯ್ಯ ಇಲಿ, ಬೆಕ್ಕು, ಜಿರಳೆ; ಸಚಿವ ಶ್ರೀರಾಮುಲು

ಬಳ್ಳಾರಿ; ಸಿಎಂ ಬೊಮ್ಮಾಯಿಯವರನ್ನು ನಾಯಿ ಮರಿಗೆ ಹೋಲಿಸಿದ್ದ ಸಿದ್ದರಾಮಯ್ಯ ವಿರುದ್ಧ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಬಳ್ಳಾರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಒಬ್ಬ ಮುಖ್ಯಮಂತ್ರಿಯನ್ನು ಅಷ್ಟು ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಲಘುವಾಗಿ ಮಾತನಾಡುವುದು ಕಾಂಗ್ರೆಸ್‌ ಸಂಸ್ಕೃತಿ ತೋರಿಸುತ್ತದೆ. ಹಾಗೆ ನೋಡುವುದಾದರೆ ಸಿದ್ದರಾಮಯ್ಯ ಸೋನಿಯಾ ಮನೆಯ ಇಲಿ, ಬೆಕ್ಕು, ಜಿರಳೆ ಎಂದು ಶ್ರೀರಾಮುಲು ಹೇಳಿದ್ದಾರೆ. ಹಗರಿ ಬೊಮ್ಮನಹಳ್ಳಿಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಮೋದಿ ಮುಂದೆ ಬೊಮ್ಮಾಯಿ ನಾಯಿ ತರಾ ಎಂದಿದ್ದರು.

Share Post