BengaluruPolitics

ವಿಧಾನಸೌಧದಲ್ಲೇ ಸೆಟ್ಲ್‌ಮೆಂಟ್‌ಗಳಾಗುತ್ತವೆ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು; ವಿಧಾನಸೌಧದಲ್ಲೇ ಸೆಟ್ಲ್‌ಮೆಂಟ್‌ಗಳಾಗುತ್ತವೆ. ಈ ಸರ್ಕಾರದಲ್ಲಿ ದುಡ್ಡಿಲ್ಲದೆ ಏನೂ ನಡೆಯೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ. ಅಧಿಕಾರಿಯೊಬ್ಬರು ಹತ್ತ ಲಕ್ಷಕ್ಕೂ ಅಧಿಕ ನಗದು ಹಣವನ್ನು ವಿಧಾನಸೌಧದೊಳಗೆ ಅಕ್ರಮವಾಗಿ ಕೊಂಡೊಯ್ಯಲು ಪ್ರಯತ್ನಿಸಿದಾಗ ಸಿಕ್ಕಿಬಿದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್‌, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಲಂಚದ ಆರೋಪದ ಮೇಲೆ ಸಚಿವ ಈಶ್ವರಪ್ಪ ಅವರು ರಾಜೀನಾಮೆ ನೀಡಿರುವುದನ್ನು ನೋಡಿದ್ದೇವೆ. ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಸರ್ಕಾರದಲ್ಲಿ ದುಡ್ಡಿಲ್ಲದೆ ಏನೂ ನಡೆಯೋದಿಲ್ಲ. ಅಧಿಕಾರಿಗಳಿಗೂ ಲಂಚ ಕೊಡಬೇಕಾಗಿದೆ. ಇಂದು ಒಂದು ಭ್ರಷ್ಟ ಆಡಳಿತ ಅನ್ನೋದು ಸಾಬೀತಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ತಿಳಿಸಿದ್ದಾರೆ.

Share Post