BengaluruCrime

ನೇಣು ಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯ ಪಟುವಿನ ದೇಹ ಪತ್ತೆ

ಬೆಂಗಳೂರು; ಬೆಂಗಳೂರಿನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವ ದೇಹದಾರ್ಢ್ಯಪಟು ಶ್ರೀನಾಥ್‌ ಆತ್ಮಹತ್ಯೆಗೆ ಶರಣಾದ ಯುವಕ. ಕೆಆರ್‌ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಶ್ರೀನಾಥ್‌ ಅವರು ಕೋಲಾರ ಜಿಲ್ಲೆ ಶ್ರೀನಿವಾಸಪುರ ಮೂಲದವರು ಎಂದು ತಿಳಿದುಬಂದಿದೆ. ಈಸ್ಟ್‌ ಪಾಯಿಂಟ್‌ ಕಾಲೇಜಿನಲ್ಲಿ ಡಿ ಫಾರ್ಮಾ ಓದುತ್ತಿದ್ದ ಶ್ರೀನಾಥ್‌, ದೇಹದಾರ್ಢ್ಯ ಪಟುವೂ ಆಗಿದ್ದರು. ಆದ್ರೆ ಏನು ಕಾರಣವೋ ಗೊತ್ತಿಲ್ಲ, ಶ್ರೀನಾಥ್‌ ವಾಸವಿದ್ದ ಕೊಠಡಿಯಲ್ಲಿ ಶ್ರೀನಾಥ್‌ ನೇಣಿಗೆ ಶರಣಾಗಿದ್ದಾರೆ. ಆದ್ರೆ ಶ್ರೀನಾಥ್‌ ಪೋಷಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಆವಲಹಳ್ಳಿಯಲ್ಲಿ ಪೊಲೀಸ್‌ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

 

Share Post