DistrictsPolitics

ಅಜ್ಮೀರ್‌ ದರ್ಗಾಕ್ಕೆ ಜನಾರ್ದನರೆಡ್ಡಿ ಭೇಟಿ; ಅಲ್ಪಸಂಖ್ಯಾತ ಮತಗಳ ಮೇಲೆ ಕಣ್ಣು

ಕೊಪ್ಪಳ; ಇತ್ತೀಚೆಗಷ್ಟೇ ಕೆಆರ್‌ಪಿಪಿ ಎಂಬ ಹೊಸ ಪಕ್ಷ ಘೋಷಣೆ ಮಾಡಿದ್ದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ, ರಾಜಕೀಯ ತಂತ್ರಗಾರಿಕೆ ಶುರು ಮಾಡಿದ್ದಾರೆ. ಮುಸ್ಲಿಂ ಮತಗಳನ್ನು ಸೆಳೆಯಲು ಅವ್ರು ಭಾರಿ ತಂತ್ರಗಾರಿಕೆ ಮಾಡಿದ್ದಾರೆ. ಈ ಕಾರಣದಿಂದಾಗಿಯೇ ಅವರು ಅಜ್ಮೀರ್‌ ದರ್ಗಾಕ್ಕೆ ಭೇಟಿ ನೀಡಿದ್ದರು ಎಂದು ಹೇಳಲಾಗುತ್ತಿದೆ.

ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಅರುಣಾ ಜೊತೆ ರಾಜಸ್ಥಾನದ ಅಜ್ಮೀರ್ ದರ್ಗಾಕ್ಕೆ ನಿನ್ನೆ ಭೇಟಿ ನೀಡಿದ್ದರು. ಖಾಜಾ ಗರೀಬ್ ನವಾಜ್ ದರ್ಗಾಗೆ ತೆರಳಿ ಚಾದರ ಮತ್ತು ಹೂ ಸಮರ್ಪಣೆ ಮಾಡಿದ್ದಾರೆ. ನಾಡಿನ ಜನರ ನೆಮ್ಮದಿಯ ಜೀವನಕ್ಕಾಗಿ ಪ್ರಾರ್ಥಿಸಿದ್ದೇವೆ ಎಂದು ಜನಾರ್ದನರೆಡ್ಡಿ ಇದೇ ವೇಳೆ ಹೇಳಿಕೊಂಡಿದ್ದಾರೆ.

ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿರುವ ಜನಾರ್ದನ ರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾರನ್ನು ಬಳ್ಳಾರಿ ಅಥವಾ ಸಿಂಧನೂರು ಕ್ಷೇತ್ರದಿಂದ ಸ್ಪರ್ಧೆಗೆ ಇಳಿಸುವ ಸಾಧ್ಯತೆ ಇದೆ.

Share Post