DistrictsPolitics

ಭ್ರಷ್ಟಾಚಾರ ಹಾಗೂ ಕಾಂಗ್ರೆಸ್‌ ಅವಿಭಾಜ್ಯ ಅಂಗ; ಸಿಎಂ ಬೊಮ್ಮಾಯಿ

ಬೆಂಗಳೂರು; ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್‌ ಕಾಂಗ್ರೆಸ್‌ ಅಂದ್ರೆ ಭ್ರಷ್ಟಾಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಏರ್‌ಪೋರ್ಟ್‌ನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಡೆಸಿದ ಪ್ರತಿಭಟನೆಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‌ ಪಕ್ಷವೇ ಭ್ರಷ್ಟಾಚಾರದಲ್ಲಿ ಪಿಎಚ್‌ಡಿ ಮಾಡಿದೆ. ಆದ್ರೆ ನಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ ಎಂದು ಸಿಎಂ ಆಕ್ರೋಶ ಹೊರಹಾಕಿದರು.

ಮೊದಲು ಕಾಂಗ್ರೆಸ್‌ನವರು ಲೋಕಾಯುಕ್ತ ತನಿಖೆಯಲ್ಲಿ ಸ್ವಚ್ಛವಾಗಿ ಬರಲಿ. ಬೆಂಗಳೂರನ್ನು ಹಾಳು ಮಾಡಿದವರು ಅವರೇ. ಹತ್ತು ಹಲವು ಹಗರಣಗಳು ಅವರ ಕಾಲದಲ್ಲಿ ಆಗಿವೆ. ಕಾಂಗ್ರೆಸ್‌ನವರು ಭ್ರಷ್ಟಾಚಾರಕ್ಕೆ ದೊಡ್ಡ ಕೊಡುಗೆ ಕೊಟ್ಟವರು ಎಂದು ಸಿಎಂ ಇದೇ ವೇಳೆ ಆರೋಪ ಮಾಡಿದರು.

Share Post