CrimeDistricts

ಪಾವಗಡದಲ್ಲಿ ತಪ್ಪಿದ ಬಸ್ ದುರಂತ; ಹಳ್ಳಕ್ಕೆ ನುಗ್ಗಿದ ಬಸ್‌

ತುಮಕೂರು: ಪಾವಗಡದ ಪಳವಳ್ಳಿ ಬಸ್ ದುರಂತದ, ಬೆನ್ನಲ್ಲೆ ತಾಲ್ಲೂಕಿನಲ್ಲಿ ಮತ್ತೊಂದು ಬಸ್ ದುರಂತ ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿ ಸಿ ಬಸ್ ರಸ್ತೆ ಬದಿ ಹಳ್ಳಕ್ಕೆ ನುಗ್ಗಿರುವ ಘಟನೆ ನಡೆದಿದ್ದು ಕೂದಲೆಳೆ ಅಂತರದಲ್ಲಿ ಭೀಕರ ದುರಂತ ತಪ್ಪಿದೆ. ಪಾವಗಡ ತಾಲ್ಲೂಕಿನ ವೈ ಎನ್ ಹೊಸಕೋಟೆ ಸಮೀಪದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ನ ಮುಂಬದಿಯಲ್ಲಿ ಕುಳಿತಿದ್ದ ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾರಿಗೂ ಪ್ರಾಣಾಪಯವಾಗಿಲ್ಲ ಎಂದು ತಿಳಿದು ಬಂದಿದೆ.

ಕಳೆದ ಮಾರ್ಚ್ 2022 ರ ನಲ್ಲಿ ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಮೇಲ ಖಾಸಗಿ ಬಸ್ ಮಗುಚಿ ಬಿದ್ದು 7 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಘಟನೆ ಮಾಸುವ ಮೊದಲೆ ಕೆಎಸ್ ಆರ್ ಟಿ ಸಿ ಬಸ್ ಹಳ್ಳಕ್ಕೆ ನುಗ್ಗಿದ್ದು ಪ್ರಯಾಣಿಕರನ್ನ ದಂಗುಬಡಿಸಿದೆ.

Share Post