CrimeDistricts

ಗಂಡು ಹಾರಿಸಿಕೊಂಡು ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆ

ಕೊಡಗು; ತಲೆಗೆ ಗುಂಡುಹಾರಿಸಿಕೊಂಡು ನಿವೃತ್ತ ಅರಣ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕೊಡಗಿನಲ್ಲಿ ನಡೆದಿದೆ.

ಕುಶಾಲನಗರ ತಾಲ್ಲೂಕಿನ ಬಸವಮತ್ತೂರಿನಲ್ಲಿ ಘಟನೆ ನಡೆದಿದ್ದು ಸ್ಥಳೀಯರನ್ನ ಬೆಚ್ಚಿಬೀಳಿಸಿದೆ. ನಿವೃತ್ತ ಅರಣ್ಯಾಧಿಕಾರಿ ಶಶಿಧರ್ (80) ಆತ್ಮಹತ್ಯೆಗೆ ಶರಣಾದವರು. ಕೊಡಗಿನ ವಿವಿಧೆಡೆ ರೇಂಜರ್ ಆಫೀಸರ್ ಆಗಿ ಕಾರ್ಯನಿರ್ವಹಿಸಿದ್ದ ಶಶಿಧರ್ ಅವರಹ ನಿದ್ರಾಹೀನತೆ ಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದೆ ಕಾರಣಕ್ಕೆ ರಿವಾಲ್ವರ್ ನಿಂದ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿರುವ ಶಶಿಧರ್ ಅವರು ತೀವ್ರ ಅನಾರೋಗ್ಯದ ಸಮಸ್ಯೆ ಕಾಡುತ್ತಿದ್ದ ಹಿನ್ನೆಲೆ ಸಾಯುವ ನಿರ್ಧಾರಕ್ಕೆ ಬಂದಿದ್ದೆನೆ ಎಂದು ಬರೆದಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದ ಹೆಚ್ಚಿನ ತನಿಖೆ ನಡೆಯುತ್ತಿದೆ.

Share Post