DistrictsPolitics

ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಆರ್‌.ಅಶೋಕ್‌ ಔಟ್‌

ಬೆಂಗಳೂರು; ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಆರ್‌.ಅಶೋಕ್‌ ಔಟ್‌ ಆಗಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ಗೋಪಾಲಯ್ಯ ಅವರನ್ನು ತೆಗೆದು ಅಶೋಕ್‌ ಅವರನ್ನು ನೇಮಿಸಲಾಗಿತ್ತು. ಇದಕ್ಕೆ ಮಂಡ್ಯದಲ್ಲಿ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್‌ ಅಶೋಕ್‌ ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಹೀಗಾಗಿ ಇದೀಗ ಆರ್‌.ಅಶೋಕ್‌ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ತೆಗೆಯಲಾಗಿದೆ.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಆರ್‌.ಅಶೋಕ್‌ ಅವರಿಗೆ ಗ್ರಾಮ ವಾಸ್ತವ್ಯ ಮಾಡುವಂತೆ ಸೂಚನೆ ನೀಡಲಾಗಿದೆ. ಕಂದಾಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಅವರಿಗೆ ವಹಿಸಿದ್ದೇವೆ. ಹೀಗಾಗಿ ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಅವರನ್ನು ಮುಕ್ತಗೊಳಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಮಂಡ್ಯ ಜಿಲ್ಲೆಗೆ ಸದ್ಯಕ್ಕೆ ಯಾರನ್ನೂ ಉಸ್ತುವಾರಿಯನ್ನಾಗಿ ಮರುನೇಮಕ ಮಾಡಿಲ್ಲ.

Share Post