BengaluruPolitics

ಮಾರ್ಚ್‌ 1ರಿಂದ ಬಿಜೆಪಿ ರಥಯಾತ್ರೆ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು; ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ ಆರಂಭವಾಗಲಿದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗ ಚುನಾವಣೆ ಸಮಯ. ಈ ಸಮಯದಲ್ಲಿ ಎಲ್ಲರೂ ದಣಿವರಿಯದೆ ಪಕ್ಷ ಸಂಘಟನೆ ಮಾಡಬೇಕು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಹಲವು ಕಾರ್ಯಕ್ರಮಗಳು ಕಾರ್ಯರೂಪಕ್ಕೆ ಬಂದಿವೆ. ಕೊವಿಡ್‌ ಸಮಯದಲ್ಲಿ ಯಡಿಯೂರಪ್ಪ ಅವರು ಸಮರ್ಥವಾಗಿ ನಿಭಾಯಿಸಿದ್ದಾರೆ. ನಾನೂ ಕೂಡಾ ಪ್ರವಾಹದ ಸಮಯದಲ್ಲಿ ಯಾವುದೇ ಸಮ್ಸಯೆಯಾಗದಂತೆ ನೋಡಿಕೊಂಡಿದ್ದೇನೆ. ಇದೆಲ್ಲಾ ವಿಚಾರಗಳನ್ನು ಮಂಡಲ ಪ್ರಭಾರಿಗಳು ಜನರಿಗೆ ಮುಟ್ಟಿಸಬೇಕಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Share Post