CrimeNational

ಆಕಸ್ಮಿಕ ಗುಂಡು ತಗುಲಿ ಯೋಗಿ ಆದಿತ್ಯನಾಥ್‌ ಭದ್ರತಾ ಸಿಬ್ಬಂದಿ ಸಾವು

ಲಕ್ನೋ; ರಿವಾಲ್ವಾರ್‌ ಸ್ವಚ್ಛಗೊಳಿಸುತ್ತಿರುವಾಗ ಆಕಸ್ಮಿಕವಾಗಿ ತಲೆಗೆ ಗುಂಡು ಹಾರಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರ ಭದ್ರತಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಲಖ್ನೋದಲ್ಲಿ ಈ ಘಟನೆ ನಡೆದಿದೆ. ಹೆಡ್‌ಕಾನ್ಸ್‌ಟೇಬಲ್‌ ಸಂದೀಪ್‌ ಯಾದವ್‌ ಮೃತಪಟ್ಟ ಭದ್ರತಾ ಸಿಬ್ಬಂದಿ.

ಸಂದೀಪ್ ಯಾದವ್ ಇಂದು ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಹೀಗಾಗಿ ಅವರು, ತಮ್ಮ ಮನೆಯಲ್ಲಿ ರಿವಾಲ್ವರ್ ಅನ್ನು ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ರಿವಾಲ್ವರ್‌ನಿಂದ ಗುಂಡು ಹಾರಿ ಈ ದುರಂತ ನಡೆದಿದೆ.

Share Post