BengaluruPolitics

ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಅಕ್ರಮ ಮಾಡಿರೋದು ಸತ್ಯ; ಸಿಎಂ ಬೊಮ್ಮಾಯಿ

ಬೆಂಗಳೂರು; ಅರ್ಕಾವತಿ ರಿಡೂ ಪ್ರಕರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಕ್ರಮ ಮಾಡಿದ್ದಾರೆ. ಅವರೇ ನೇಮಿಸಿದ ನ್ಯಾ.ಕೆಂಪಣ್ಣ ಆಯೋಗವೇ ಈ ವರದಿ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ನಾನು ಸುಳ್ಳು ಹೇಳುತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ಕಟು ಸತ್ಯ ಎದುರಿಸುವ ಕಾಲ ಸನಿಹವಾಗಿದೆ ಎಂದು ಹೇಳಿದರು.

ಅರ್ಕಾವತಿ ರಿಡೂ ಅಕ್ರಮ ಆರೋಪವನ್ನು ನಾನು ಮಾಡುತ್ತಿಲ್ಲ. ಈ ಬಗ್ಗೆ ತನಿಖೆ ನಡೆಸಲು ಸಿದ್ದರಾಮಯ್ಯ ಅವರೇ ಸಮಿತಿ ರಚನೆ ಮಾಡಿದ್ದರು. ಆ ಸಮಿತಿ ನೀಡಿರುವ ವರದಿಯನ್ನೇ ನಾನು ಓದಿದ್ದೇನೆ. ಕೆಂಪಣ್ಣ ಸಮಿತಿ ಸುದೀರ್ಘವಾಗಿ ತನಿಖೆ ಮಾಡಿ ವರದಿ ಕೊಟ್ಟಿದೆ. ಅದನ್ನು ನಾನು ಸದನದಲ್ಲಿ ಓದಿ ಹೇಳಿದ್ದೇನೆ. ಆದ್ರೆ ಕಾಂಗ್ರೆಸ್‌ ನವರು ಇದನ್ನು ಅಲ್ಲಗೆಳೆದು ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಹೇಳಿದರು.

ಅಧಿಕಾರಿಗಳು ಕಡತ ತೆಗೆದುಕೊಂಡು ಬಂದಿದ್ದರು. ಅದನ್ನು ನಾನು ಅನುಮೋದಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದರ ಅರ್ಥ ತಪ್ಪು ಮಾಡಿದ್ದಾರೆ ಅಂತಾನೇ ಅಲ್ಲವೇ ಎಂದು ಸಿಎಂ ಇದೇ ವೇಳೆ ಪ್ರಶ್ನೆ ಮಾಡಿದರು.

Share Post