DistrictsPolitics

ಕರ್ನಾಟಕದಲ್ಲಿ ಅಭಿವೃದ್ಧಿಯ ರಥ ಸಾಗುತ್ತಿದೆ; ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ; ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಅಭಿವೃದ್ಧಿಯ ರಥ ರಾಜ್ಯದ ಹಳ್ಳಿ ಹಳ್ಳಿ ತಲುಪಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು, ಕರ್ನಾಟಕದ ಸಹೋದರ, ಸಹೋದರರಿಗೆ ಧನ್ಯವಾದಗಳು ಎಂದರು. ಜಯ ಭಾರತ ಜನನಿಯನ ತನುಜಾತೆ ಜಯಹೇ ಕರ್ನಾಟಕ ಮಾತೆ ಎಂದು ನಾಡಗೀತೆದ ಸಾಲುಗಳನ್ನು ಹೇಳಿದ ಪ್ರಧಾನಿ ಮೋದಿ, ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ ಎಂದರು. ಡಬಲ್‌ ಎಂಜಿನ್‌ ಸರ್ಕಾರ ಬೃಹತ್‌ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಬಿಜೆಪಿಯ ಧ್ಯೇಯ ಒಂದೇ. ಅದು ಅಭಿವೃದ್ಧಿ ಮಾತ್ರ. ನಾವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದೇವೆ. ಹೀಗಾಗಿ ವಿಶ್ವವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಮೋದಿ ಹೇಳಿದರು.

ಇದೇ ವೇಳ ಯಡಿಯೂರಪ್ಪ ಅವರ ಸೇವೆಯನ್ನು ಪ್ರಧಾನಿ ಮೋದಿ ಕೊಂಡಾಡಿದರು. ಐವತ್ತು ವರ್ಷಗಳಿಂದ ಯಡಿಯೂರಪ್ಪ ಜನಸೇವೆ ಮಾಡಿದ್ದಾರೆ. ಬಿಜೆಪಿಯನ್ನು ಕೆಳಮಟ್ಟದಿಂದ ಕಟ್ಟಿ ಬೆಳೆಸಿದ್ದಾರೆ ಎಂದು ಮೋದಿ ಹೇಳಿದರು. ದೇಶದಲ್ಲಿ ನಾವು 74 ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಿದ್ದೇವೆ. ಬಡವರೂ ಕೂಡಾ ವಿಮಾನದಲ್ಲಿ ಓಡಾಡಬೇಕು ಅನ್ನೋದು ನಮ್ಮ ಉದ್ದೇಶ ಎಂದು ಮೋದಿ, ಮಲೆನಾಡು ಅಭಿವೃದ್ಧಿಗೆ ನಾವು ಬದ್ಧ ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷ ಹಲವು ದಶಕಗಳ ಕಾಲ ದೇಶವನ್ನು ಆಳಿದೆ. ಆದ್ರೆ ಅವರು ಅಭಿವೃದ್ಧಿಯನ್ನೇ ಮಾಡಲಿಲ್ಲ. ನಾವು ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುಂದುವರೆಯುತ್ತಿದ್ದೇವೆ ಎಂದು ಮೋದಿ ಹೇಳಿದರು.

Share Post