DistrictsPolitics

ಇದೇ ನನ್ನ ಕೊನೆಯೆ ಚುನಾವಣೆ; ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ ಹೆಚ್ಡಿಕೆ

ಚನ್ನಪಟ್ಟಣ; ಸೂಕ್ತ ಅಭ್ಯರ್ಥಿ ಸಿಕ್ಕಿದ್ದಿದ್ದರೆ ನಾನು ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡುತ್ತಿರಲಿಲ್ಲ. ನನಗೆ ಇದೇ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ನನಗೆ ಇದೇ ಕೊನೆಯ ಚುನಾವಣೆ. ನಂತರ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಈ ಬಾರಿಯೇ ಸೂಕ್ತ ಅಭ್ಯರ್ಥಿ ಹುಡುಕುತ್ತಿದ್ದೆವು. ಆದ್ರೆ ಯಾರೂ ಸಿಗಲಿಲ್ಲವಾದ್ದರಿಂದ ನಾನು ಇಲ್ಲೇ ಸ್ಪರ್ಧೆ ಮಾಡುತ್ತಿದ್ದೇನೆ. ನಾನು ಈ ಕ್ಷೇತ್ರ ಬಿಟ್ಟು ಬೇರೆಲ್ಲೂ ಸ್ಪರ್ಧೆ ಮಾಡೋದಿಲ್ಲ. 2028ರ ಚುನಾವಣೆ ವೇಳೆಗೆ ಇಲ್ಲಿ ಸೂಕ್ತ ಅಭ್ಯರ್ಥಿಯನ್ನು ಸಿದ್ಧಪಡಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಹೆಚ್ಡಿಕೆ ಇದೇ ವೇಳೆ ಹೇಳಿದ್ದಾರೆ.

Share Post