Bengaluru

ಚುನಾವಣೆ ಹೊತ್ತಲ್ಲಿ ಆರು ನಿಗಮಗಳಿಗೆ ನಿರ್ದೇಶಕ ನೇಮಕ

ಬೆಂಗಳೂರು; ಚುನಾವಣೆ ಇನ್ನು ಎರಡು ತಿಂಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದ ಆರು ನಿಗಮಗಳಿಗೆ ಹನ್ನೊಂದು ನಿರ್ದೇಶಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಲ್ಲಾ ಹನ್ನೊಂದೂ ನಿರ್ದೇಶಕರೂ ಸಿಎಂ ತವರು ಜಿಲ್ಲೆ ಹಾವೇರಿಗೆ ಸೇರಿದವರಾಗಿದ್ದಾರೆ. ಇನ್ನೂ ವಿಶೇಷ ಎಂದರೆ ಇದರಲ್ಲಿ ಆರು ಮಂದಿ ಸಿಎಂ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿ ಕ್ಷೇತ್ರದವತಾಗಿದ್ದಾರೆ.

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮರಾಠ ಅಭಿವೃದ್ಧಿ ನಿಗಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ, ಅಲೆಮಾರಿ, ಅರೆಅಲೆಮಾರಿ ಸಮಯದಾಯದ ಅಭಿವೃದ್ಧಿ ನಿಗಮ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಗಳಿಗೆ ಈ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

Share Post