BengaluruPolitics

ಕಾಂಗ್ರೆಸ್ ಗೆ ಪುಟ್ಟಣ್ಣ ಸೇರ್ಪಡೆ; ಸ್ವಾಗತಿಸಿದ ಡಿಕೆಶಿ

ಬೆಂಗಳೂರು; ಸತತ ನಾಲ್ಕು ಬಾರಿ ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಗೆ ಆಯ್ಕೆಯಾಗಿದ್ದ ಪುಟ್ಟಣ್ಣ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಡಿ.ಕೆ.ಶಿವಕುಮಾರ್, ಸುರ್ಜೇವಾಲಾ ಹಾಗೂ ಸಿದ್ದರಾಮಯ್ಯ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಪುಟ್ಟಣ್ಣ ಅವರನ್ನು ಕಾಂಗ್ರೆಸ್ ಗೆ ಸ್ವಾಗತಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದರು. ಪುಟ್ಟಣ್ಣ ಅವರು ದೀರ್ಘ ಕಾಲ ಎಂಎಲ್ ಸಿ ಆಗಿದ್ದರು. ಸತತ ನಾಲ್ಕು ಬಾರಿ ಪರಿಷತ್ ಗೆ ಆಯ್ಕೆಯಾಗಿದ್ದರು. ಆದರೆ ಬಿಜೆಪಿ ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಬಿಜೆಪಿಯಲ್ಲಿದ್ದ ಕಾರಣಕ್ಕೆ ಅವರ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನೀಡಲಾಗಲಿಲ್ಲ. ಹೀಗಾಗಿ ಅವರು ಕಾಂಗ್ರೆಸ್ ತೊರೆದುಬಂದಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Share Post