DistrictsNational

ಸಿದ್ದರಾಮಯ್ಯ ಅವರು ಎಲ್ಲಿ ನಿಂತರೂ ಸೋಲುತ್ತಾರೆ; ಆರ್‌.ಅಶೋಕ್‌ ಭವಿಷ್ಯ

ಬಳ್ಳಾರಿ; ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲೋದಿಲ್ಲ. ಅವರು ಚುನಾವಣೆಗೆ ನಿಲ್ಲೋದಕ್ಕೆ ಪಾಕಿಸ್ತಾನ, ಅಫ್ಘಾನಿಸ್ತಾನ ಅಥವಾ ಬಾಂಗ್ಲಾದೇಶಕ್ಕೆ ಹೋದರೆ ಒಳ್ಳೆಯದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯ ಈ ಬಾರಿ ಗೆಲ್ಲೋದಿಲ್ಲ ಎಂದು ಭವಿಷ್ಯ ನುಡಿದರು.

224 ಕ್ಷೇತ್ರಗಳಲ್ಲಿ ಯಾವ ಕ್ಷೇತ್ರದಲ್ಲೂ ಸಿದ್ದರಾಮಯ್ಯ ಸ್ಪರ್ಧೆ ಮಾಡೋದು ಕಷ್ಟ. ಯಾಕಂದ್ರೆ ಅವ್ರು ಎಲ್ಲೇ ಹೋದರೂ ಸೋಲುತ್ತಾರೆ. ಅವರು ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದು, ಬದಾಮಿ ಬಿಟ್ಟುಬಂದಿದ್ದಾರೆ. ಕೋಲಾರದಲ್ಲಿ ಸ್ಪರ್ಧಿಸಿದರೂ ಗೆಲ್ಲೋದಕ್ಕೆ ಆಗೋದಿಲ್ಲ ಎಂದು ಆರ್‌.ಅಶೋಕ್‌ ಹೇಳಿದರು. ಸಿದ್ದರಾಮಯ್ಯ ಅವರಿಗೆ ಅವರ ಪಕ್ಷದವರೇ ವಿಲನ್‌. ಸಿದ್ದರಾಮಯ್ಯ ಅವರನ್ನು ಡಿ.ಕೆ.ಶಿವಕುಮಾರ್‌ ಅವರೇ ಸೋಲಿಸುತ್ತಾರೆ ಎಂದು ಅಶೋಕ್‌ ಹೇಳಿದರು.

Share Post