BengaluruPolitics

ಸ್ವಕ್ಷೇತ್ರದಲ್ಲೇ ಸಿಎಂಗೆ ಶಾಕ್‌; ಮಾಜಿ ಸಂಸದ ಮಂಜುನಾಥ್‌ ಕುನ್ನೂರ್‌ ಬಿಜೆಪಿಗೆ ಗುಡ್‌ಬೈ

ಹಾವೇರಿ; ಶಿಗ್ಗಾಂವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರು ಪ್ರತಿನಿಧಿಸುವ ಕ್ಷೇತ್ರ. ಈ ಕ್ಷೇತ್ರದ ಪ್ರಮುಖ ಬಿಜೆಪಿ ನಾಯಕರಾಗಿದ್ದ ಮಾಜಿ ಸಂಸದ ಮಂಜುನಾಥ್‌ ಕುನ್ನೂರ್‌ ಹಾಗೂ ಅವರ ಪುತ್ರ ರಾಜು ಕುನ್ನೂರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಕದ ತಟ್ಟಲು ನಿರ್ಧಾರ ಮಾಡಿದ್ದಾರೆ. ಇದರಿಂದಾಗಿ ಸಿಎಂ ಬೊಮ್ಮಾಯಿಗೆ ಶಾಕ್‌ ಆಗಿದೆ.
ಮಂಜುನಾಥ್‌ ಕುನ್ನೂರ್‌ ಅವರು ಸಿಎಂ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಎರಡು ಬಾರಿ ಶಾಸಕರಾಗಿದ್ದರು. ೧೯೮೯ ಹಾಗೂ ೧೯೯೪ರ ಚುನಾವಣೆಯಲ್ಲಿ ಸತತವಾಗಿ ಗೆಲುವು ಸಾಧಿಸಿದ್ದರು. ನಂತೆ 2004ರಲ್ಲಿಧಾರವಾಡ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಅನಂತರ 2008ರಲ್ಲಿ ಕಾಂಗ್ರೆಸ್‌ ಸೇರಿದ್ದ ಮಂಜುನಾಥ್‌ ಕುನ್ನೂರ್‌ ಅವರು, ಪ್ರಹ್ಲಾದ್‌ ಜೋಷಿ ವಿರುದ್ಧ ಸೋತಿದ್ದರು. ಅನಂತರ ಬಿಜೆಪಿ ಸೇರಿದ್ದ ಅವರು, ಈಗ ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಇಂದೇ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

Share Post