CrimeDistricts

ಶಿವಮೊಗ್ಗದಲ್ಲಿ ನಿಲ್ಲದ ಬಂಜಾರಾ ಪ್ರತಿಭಟನೆ; ಮತ್ತೆ ಬೀದಿಗಿಳಿದು ಹೋರಾಟ

ಶಿವಮೊಗ್ಗ; ಒಳ ಮೀಸಲಾತಿ ವಿರೋಧಿಸಿ ನಿನ್ನೆ ಶಿಕಾರಿಪುರದಲ್ಲಿ ಬಂಜಾರಾ ಸಮಯದಾಯದವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲ ಉದ್ರಿಕ್ತರು ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಅನಂತರ ಸ್ಥಳದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿತ್ತು. ಘಟನೆ ಸಂಬಂಧ ಮೂವರನ್ನು ಅರೆಸ್ಟ್‌ ಮಾಡಲಾಗಿತ್ತು. ಅನಂತರವೂ ಕೂಡಾ ಪ್ರತಿಭಟನೆ ಮುಂದುವರೆದಿದೆ. ಮೂವರ ಬಂಧನ ವಿರೋಧಿಸಿ ಇವತ್ತೂ ಕೂಡಾ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕುಂಚೇನಹಳ್ಳಿ ತಾಂಡಾದ ರಸ್ತೆಯಲ್ಲಿ ಏಕಾಏಕಿ ಪ್ರತಿಭಟನಾಕಾರರು ರಸ್ತೆಗಿಳಿದಿದ್ದಾರೆ. ನಿನ್ನೆ ಪ್ರತಿಭಟನೆ ವೇಳೆ ಮೂವರನ್ನು ಬಂಧಿಸಲಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ರಸ್ತೆಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಇದರಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಹರಸಾಹಸಪಡುತ್ತಿದ್ದಾರೆ.

 

Share Post