CrimeDistricts

ಹಣಕಾಸಿನ ಸಮಸ್ಯೆ; ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು; ಹಣಕಾಸಿನ ಸಮಸ್ಯೆಯಿಂದಾಗಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಮಂಗಳೂರು ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ವಿಜಯನಗರದಲ್ಲಿ ವಾಸವಿದ್ದ ದೇವೇಂದ್ರ ಕುಟುಂಬದವರು ಮಂಗಳೂರಿನ ಕರುಣಾ ರೆಸಿಡೆನ್ಸಿ ಹೆಸರಿನ ಲಾಡ್ಜ್‌ನಲ್ಲಿ ರೂಮ್‌ ಮಾಡಿದ್ದರು. ಅಲ್ಲೇ ಅವರು ಆತ್ಮಹತ್ಯೆ ಶರಣಾಗಿದ್ದಾರೆ. ತೀವ್ರ ಹಣಕಾಸು ಸಮಸ್ಯೆ ಇದ್ದಿದ್ದರಿಂದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ದೇವೇಂದ್ರ ಹಾಗೂ ಅವರ ಪತ್ನಿ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾದವರು ಎಂದು ಗೊತ್ತಾಗಿದೆ. ಬೇರೆ ಬೇರೆ ರೂಪದಲ್ಲಿ ನಷ್ಟಕ್ಕೊಳಗಾಗಿದ್ದ ದೇವೇಂದ್ರ ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share Post