BengaluruPolitics

ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿ ಹಾಕುತ್ತೇವೆ; ಸಿಎಂ ಬೊಮ್ಮಾಯಿ

ಚಿಕ್ಕಬಳ್ಳಾಪುರ; ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಅವರು, ವರುಣಾದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ನಾವು ಪ್ರಬಲ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದು ಹೇಳಿದ್ದಾರೆ.

ವಿಜಯೇಂದ್ರ ಅವರು ವರುಣಾದಲ್ಲಿ ಸ್ಪರ್ಧೆ ಮಾಡಬೇಕೆಂಬ ಒತ್ತಡ ಬರುತ್ತಿದೆ. ಈ ಬಗ್ಗೆ ಯಡಿಯೂರಪ್ಪ ಹಾಗೂ ಕೇಂದ್ರ ಸಂಸದೀಯ ಮಂಡಳಿ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಇದೇ ವೇಳೆ ಹೇಳಿದ್ದಾರೆ. ಈ ಮೂಲಕ ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಬಹುದೆಂಬ ಸುದ್ದಿಗೆ ಪುಷ್ಠಿ ನೀಡಿದ್ದಾರೆ.

Share Post