BengaluruPolitics

ಕೆಪಿಸಿಸಿ ಕಚೇರಿ ಮುಂದೆ ಹೈಡ್ರಾಮಾ; ಟಿಕೆಟ್‌ಗಾಗಿ ವಿಷಯ ಕುಡಿಯಲು ಯತ್ನ

ಬೆಂಗಳೂರು; ಕಾಂಗ್ರೆಸ್‌ ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಈ ನಡುವೆಯೇ ಕೆಪಿಸಿಸಿ ಕಚೇರಿ ಮುಂದೆ ಹೈಡ್ರಾಮಾ ನಡೆದಿದೆ. ಹಲವಾರು ಕ್ಷೇತ್ರಗಳಲ್ಲಿ ಒಂದಕ್ಕಿಂತ ಹೆಚ್ಚು ಪ್ರಬಲ ಆಕಾಂಕ್ಷಿಗಳಿದ್ದು, ಕಾಂಗ್ರೆಸ್‌ನಲ್ಲಿ ಬಂಡಾಯ ಪ್ರಬಲವಾಗುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ತರೀಕೆರೆ ಕ್ಷೇತ್ರದ ಗೋಪಿಕೃಷ್ಣ ಬೆಂಬಲಿಗರು ಇಂದು ಕೆಪಿಸಿಸಿ ಕಚೇರಿ ಬಳಿ ಜಮಾಯಿಸಿದ್ದು, ಗೋಪಿಕೃಷ್ಣ ಅವರಿಗೇ ಟಿಕೆಟ್‌ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಈ ವೇಳೆ ಕೆಲ ಬೆಂಬಲಿಗರು ವಿಷಯ ಕುಡಿಯಲು ಯತ್ನಿಸಿರುವ ಘಟನೆಯೂ ನಡೆದಿದೆ.

ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಗೋಪಿಕೃಷ್ಣ ಅವರಿಗೇ ಟಿಕೆಟ್‌ ನೀಡಬೇಕೆಂದು ಆಗ್ರಹಿಸಿ, ನೂರಾರು ಮಂದಿ ಕೆಪಿಸಿಸಿ ಕಚೇರಿ ಮುಂದೆ ಜಮಾಯಿಸಿದ್ದಾರೆ. ಇದರಲ್ಲಿ ಕೆಲವರು ವಿಷದ ಬಾಟಲಿ ಹಿಡಿದು ಬಂದಿದ್ದು, ಗೋಪಿಕೃಷ್ಣ ಅವರಿಗೆ ಟಿಕೆಟ್‌ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾರೆ. ಕೆಲವರು ಬಾಟೆಲ್‌ ತೆಗೆದು ವಿಷ ಕುಡಿಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ, ವಿಷದ ಬಾಟಲ್‌ಗಳನ್ನು ಕಿತ್ತುಕೊಂಡಿದ್ದಾರೆ.

Share Post