DistrictsPolitics

ದೇವೇಗೌಡರ ತೀರ್ಮಾನಕ್ಕೆ ನಾವು ಬದ್ಧ; ಹೆಚ್‌.ಡಿ.ರೇವಣ್ಣ

ಹಾಸನ; ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಬೇಕು ಎಂಬುದನ್ನು ದೇವೇಗೌಡರು ತೀರ್ಮಾನ ಮಾಡುತ್ತಾರೆ. ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ರಾತ್ರಿ ಈ ಬಗ್ಗೆ ಚರ್ಚೆಯಾಗಿದೆ. ದೇವೇಗೌಡರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.

ದೇವೇಗೌಡರಿಗೆ ಹಲವು ದಶಕಗಳ ಅನುಭವವಿದೆ. ಹಾಸನದ ಬಗ್ಗೆ ಅವರಿಗೆ ಗೊತ್ತು, ಕುಳಿತು ತೀರ್ಮಾನ ಮಾಡುತ್ತಾರೆ. ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದು ರೇವಣ್ಣ ಹೇಳಿದರು.

Share Post