NationalPolitics

ಸಿಎಂ ಅಭ್ಯರ್ಥಿ ವಿಚಾರ; ನನ್ನ ಹೇಳಿಕೆ ತಿರುಚಿದ್ದಾರೆ ಎಂದು ಸಿದ್ದರಾಮಯ್ಯ

ಬೆಂಗಳೂರು; ಸಿಎಂ ಅಭ್ಯರ್ಥಿ ವಿಚಾರವಾಗಿ ನಾನು ನೀಡಿರುವ ಹೇಳಿಕೆಯನ್ನು ಖಾಸಗಿ ವಾಹಿನಿ ತಿರುಚಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಅವರು, ಡಿ.ಕೆ.ಶಿವಕುಮಾರ್‌ ಅವರೂ ಸಿಎಂ ಆಕಾಂಕ್ಷಿ, ನಾನೂ ಸಿಎಂ ಆಕಾಂಕ್ಷಿ ಎಂದು ಹೇಳಿದ್ದೆ. ಆದ್ರೆ ಖಾಸಗಿ ವಾಹಿನಿಯವರು ನನ್ನ ಹೇಳಿಕೆ ತಿರುಚಿದ್ದಾರೆ ಎಂದು ಹೇಳಿದ್ದಾರೆ.

ಇದು ನಿಜಕ್ಕೂ ಸತ್ಯಕ್ಕೆ ದೂರವಾದ ಆರೋಪ. ನಾನು ಯಾವತ್ತೂ ಅಂತಹ ಕಮೆಂಟ್‌ ಮಾಡೋದಿಲ್ಲ. ನನ್ನ ಹೇಳಿಕೆ ತಿರುಚಲಾಗಿದೆ. ನಾನು ಹಾಗೆ ಹೇಳಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಿಎಂ ಆಯ್ಕೆ ನಡೆಯುತ್ತೆ ಎಂದು ಹೇಳಿದ್ದೆ. ಅದನ್ನು ಸಂಪೂರ್ಣ ತಿರುಚಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜೊತೆಗೆ ಆಧಾರರಹಿತ ಆ ಪೋಸ್ಟ್‌ನ್ನು ತೆಗೆಯುವಂತೆ ಒತ್ತಾಯ ಕೂಡಾ ಮಾಡಿದ್ದಾರೆ.

Share Post