BengaluruPolitics

ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ್ ಬಿಜೆಪಿ ಸೇರ್ಪಡೆ

ಕಾರವಾರ; ‌ಮಾಜಿ ಸಿಎಂ ದಿವಂಗತ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭುಷಣ್‌ ಹೆಗಡೆ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜೆಡಿಎಸ್‌ನಿಂದ ಅವರಿಗೆ ಸ್ಪರ್ಧೆಗೆ ಅವಕಾಶ ಸಿಕ್ಕಿದ್ದರೂ ಅವರು ಜೆಡಿಎಸ್‌ ತೊರೆದು ಬಿಜೆಪಿ ಬಾವುಟ ಹಿಡಿದಿದ್ದಾರೆ. ಇದರಿಂದಾಗಿ ಶಿರಸಿ ಕ್ಷೇತ್ರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.

ಜೆಡಿಎಸ್‌ನಲ್ಲಿದ್ದ ಶಶಿಭೂಷಣ್‌ ಅವರು ಕಳೆದ ಚುನಾವಣೆಯಲ್ಲಿ ಸೋತಿದ್ದರು, ಅದಕ್ಕೂ ಬಿಜೆಪಿಯಿಂದಲೂ ಸ್ಪರ್ಧೆ ಮಾಡಿ ಎರಡು ಬಾರಿ ಪರಾಭವಗೊಂಡಿದ್ದರು. ಸದ್ಯ ಅವರು ಬಿಜೆಪಿಗೆ ವಾಪಸ್‌ ಆಗಿದ್ದಾರೆ. ಕಾಂಗ್ರೆಸ್‌ ಕೂಡಾ ಶಶಿಭುಷಣ್‌ ಅವರಿಗೆ ಗಾಳ ಹಾಕಿತ್ತು. ಆದ್ರೆ ಸಿಎಂ ಬೊಮ್ಮಾಯಿಯವರು ಶಶಿಭೂಷಣ್‌ ಅವರ ಜೊತೆ ಮಾತನಾಡಿ ಅವರನ್ನು ಬಿಜೆಪಿಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಿನ್ನೆ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

Share Post